ಕುಂಬ್ರ ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ಶ್ರೀ ಲಕ್ಷ್ಮೀಪೂಜೆ

0

ಪುತ್ತೂರು: ಚಿನ್ನ, ಬೆಳ್ಳಿ ಆಭರಣಗಳ ಮಾರಾಟಗಾರರು ಮತ್ತು ತಯಾರಕರಾಗಿರುವ ಕುಂಬ್ರದ ನಿಶ್ಮಿತಾ ಕಾಂಪ್ಲೆಕ್ಸ್‌ನಲ್ಲಿ ಕಳೆದ 21 ವರ್ಷಗಳಿಂದ ಗ್ರಾಹಕರಿಗೆ ಸೇವೆ ನೀಡುತ್ತಿರುವ ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ಶ್ರೀ ಗಣಪತಿ ಹೋಮ ಮತ್ತು ಶ್ರೀ ಲಕ್ಷ್ಮೀ ಪೂಜೆ ಅ.26 ರಂದು ಬೆಳಿಗ್ಗೆ ನಡೆಯಿತು. ನವೀನ್ ಪುರೋಹಿತ್ ಬೆಳ್ಳಾರೆರವರು ವೈದಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ನಿಶ್ಮಿತಾ ಕಾಂಪ್ಲೆಕ್ಸ್ ಮಾಲಕ ಪುರಂದರ ರೈ ಕೋರಿಕ್ಕಾರು, ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ್ ರೈ ಕೊಪ್ಪಳ, ಮಾಜಿ ಅಧ್ಯಕ್ಷರುಗಳಾದ ನಾರಾಯಣ ಪೂಜಾರಿ ಕುರಿಕ್ಕಾರ, ಮೆಲ್ವಿನ್ ಮೊಂತೆರೋ, ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಶಾಂತಿವನ, ಸತೀಶ್ ಆಚಾರ್ಯ, ದಾಮೋದರ ಆಚಾರ್ಯ ಕೆದ್ದಲಿಕೆ, ರವಿ ಆಚಾರ್ಯ ಕೃಷ್ಣನಗರ, ಶಬರಿ ಕಾಂಪ್ಲೆಕ್ಸ್‌ನ ಮಾಲಕ ಜಗನ್ನಾಥ ರೈ ಕೊರ್ಬಂಡ್ಕಬೀಡು, ರಾಮಕೃಷ್ಣ ರೈ, ರಾಜೇಶ್, ಗಿರಿಧರ್, ಧರ್ಣಪ್ಪ ಅರಿಯಡ್ಕ, ಸುಲೋಚನಾ ಸೇರಿದಂತೆ ಹಲವು ಮಂದಿ ಆಗಮಿಸಿ ಶುಭ ಹಾರೈಸಿದರು.

ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್‌ನ ಮಾಲಕ ಉದಯ ಆಚಾರ್ಯ ಕೃಷ್ಣನಗರರವರು ಅತಿಥಿಗಳನ್ನು ಸ್ವಾಗತಿಸಿ, ಪ್ರಸಾದ ನೀಡಿ ಸತ್ಕರಿಸಿದರು. ಮಾಲಕರ ಪತ್ನಿ ಶುಭ ಉದಯ್, ಮಕ್ಕಳಾದ ಹಿತಾಶ್ರೀ ಮತ್ತು ಹಿತೇಷ್, ಸಿಬ್ಬಂದಿ ತೃಪ್ತಿ ಉಪಸ್ಥಿತರಿದ್ದರು.

21 ನೇ ವರ್ಷಕ್ಕೆ ಪಾದಾರ್ಪಣೆ

ಶ್ರೀ ಲಕ್ಷ್ಮೀ ಜ್ಯುವೆಲ್ಲರಿ ವರ್ಕ್ಸ್ 21 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ಈ ಸಂದರ್ಭದಲ್ಲಿ ಸಹಕರಿಸಿದ ಗ್ರಾಹಕ ಬಂಧುಗಳಿಗೆ ಮಾಲಕರು ಕೃತಜ್ಞತೆ ಸಲ್ಲಿಸಿ ಮುಂದೆಯೂ ಸಹಕಾರ ನೀಡುವಂತೆ ಕೇಳಿಕೊಂಡರು. ಜ್ಯುವೆಲ್ಲರಿ ವರ್ಕ್ಸ್‌ನಲ್ಲಿ ಗ್ರಾಹಕರ ಮನದಿಚ್ಚೆಯಂತೆ ಚಿನ್ನ, ಬೆಳ್ಳಿ ಆಭರಣಗಳನ್ನು ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತಿದೆ ಅಲ್ಲದೆ ಬೆಳ್ಳಿಯ ಆಭರಣಗಳಿಗೆ ಚಿನ್ನದ ಒಪ್ಪ ಹಾಕಿ ಕೊಡುವ ವ್ಯವಸ್ಥೆ ಮತ್ತು ಮದುವೆ ಹಾಗೂ ಇನ್ನಿತರ ಸಮಾರಂಭಗಳಿಗೆ ಆಭರಣಗಳು ಬಾಡಿಗೆಗೆ ದೊರೆಯುತ್ತದೆ. ಹೆಚ್ಚಿನ ಮಾಹಿತಿಗೆ ಮೊ.9980199907ಗೆ ಸಂಪರ್ಕಿಸಬಹುದು ಎಂದು ಮಾಲಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here