ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದೀಪಾವಳಿ ಆಚರಣೆ

0

ಕಾವು: ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಅ.24ರಂದು ಸಂಜೆ ದೀಪಾವಳಿ ಆಚರಣೆ ಮಾಡಲಾಯಿತು.

ಸಂಜೆ ಕಾವು ಗೆಳೆಯರ ಬಳಗದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ದೀಪಾವಳಿ ಹಬ್ಬದ ಪ್ರಯುಕ್ತ ದೇವಾಲಯದ ಗೋಪುರ ಮತ್ತು ಪ್ರಾಂಗಣದಲ್ಲಿ ಹಣತೆ ಇರಿಸಿ ದೀಪ ಬೆಳಗಿಸಲಾಯಿತು. ಬಳಿಕ ಸಂಪ್ರದಾಯದಂತೆ ಧನಲಕ್ಷ್ಮೀ ಪೂಜೆ, ಬಲಿಯೇಂದ್ರ ಪೂಜೆ, ಹೊಸ ಅವಲಕ್ಕಿ ವಿತರಣೆ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶಿವಪ್ರಸಾದ್ ಕಡಮಣ್ಣಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪವಿತ್ರಪಾಣಿ ನನ್ಯ ಅಚ್ಚುತ ಮೂಡೆತ್ತಾಯ, ಆಡಳಿತ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್ ನಿಧಿಮುಂಡ, ಸದಸ್ಯರಾದ ಕೃಷ್ಣಪ್ರಸಾದ್ ಕೊಚ್ಚಿ, ಭಾಸ್ಕರ ಬಲ್ಯಾಯ, ನಿರ್ಮಲಾ ರೈ ಮದ್ಲ ಸೇರಿದಂತೆ ಅನೇಕ ಭಕ್ತಾದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here