ಅ.29: ಕಾವು ತುಡರ್ ಭಜನಾ ಸಂಘದ 7ನೇ ವಾರ್ಷಿಕೋತ್ಸವ;  ಭಜನಾ ಕಾರ್ಯಕ್ರಮ-ಕುಣಿತ ಭಜನೆ-ಧಾರ್ಮಿಕ ಸಭೆ-ಸನ್ಮಾನ

0

ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ಅಧೀನದಲ್ಲಿರುವ ತುಡರ್ ಭಜನಾ ಸಂಘದ 7ನೇ ವಾರ್ಷಿಕೋತ್ಸವ ಸಮಾರಂಭವು ಅ.29ರಂದು ಸಂಜೆ ನನ್ಯ ಜನಮಂಗಲ ಸಭಾಭವನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.

ಭಜನಾ ಕಾರ್ಯಕ್ರಮ:

ಸಂಜೆ ಗಂಟೆ 5ರಿಂದ ದೀಪ ಪ್ರಜ್ವಲನೆಗೊಂಡು ಭಜನಾ ಕಾರ್ಯಕ್ರಮ ಆರಂಭವಾಗಲಿದೆ, ತುಡರ್ ಭಜನಾ ಸಂಘ ಮತ್ತು ತುಡರ್ ಮಾತೃ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ಬಳಿಕ ಸುಜ್ಞಾನ ಮಕ್ಕಳ ಭಜನಾ ಸಂಘದ ಸದಸ್ಯರಿಂದ ಕುಣಿತ ಭಜನೆ ನಡೆಯಲಿದೆ.

ಧಾರ್ಮಿಕ ಸಭೆ-ಸನ್ಮಾನ:

ಸಂಜೆ ಗಂಟೆ 7ಕ್ಕೆ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀಕ್ಷೇತ್ರ ಹನುಮಗಿರಿಯ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ ಮೂಡೆತ್ತಾಯರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕರವರು ಧಾರ್ಮಿಕ ಭಾಷಣ ಮಾಡಲಿದ್ದಾರೆ. ದಾಸ ಸಾಹಿತ್ಯ ಸಂಕೀರ್ತನಕಾರ ಹಾಗೂ ಪ್ರಚಾರಕರೂ ಆಗಿರುವ ರಾಮಕೃಷ್ಣ ಕಾಟುಕುಕ್ಕೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾವು ಕೆರೆಮಾರು ಶ್ರೀ ಅಯ್ಯಪ್ಪ ಭಜನಾ ಮಂದಿರದ ಸಂಸ್ಥಾಪಕ ಸುಂದರ ಪೂಜಾರಿ ಕೆರೆಮಾರುರವರಿಗೆ ಸನ್ಮಾನ ನಡೆಯಲಿದೆ. ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ, ಅಧ್ಯಕ್ಷ ಜಗದೀಶ ನಾಯ್ಕ ಆಚಾರಿಮೂಲೆಯವರು ಉಪಸ್ಥಿತಿ ವಹಿಸಲಿದ್ದಾರೆ. ಧಾರ್ಮಿಕ ಸಭೆಯ ಬಳಿಕ ಭೋಜನ ನಡೆಯಲಿದೆ ಎಂದು ಭಜನಾ ಸಂಘದ ಅಧ್ಯಕ್ಷ ಸಂಕಪ್ಪ ಪೂಜಾರಿ ಚಾಕೋಟೆ ಮತ್ತು ಕಾರ್ಯದರ್ಶಿ ಚಂದ್ರಶೇಖರ ಬಲ್ಯಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here