ಮರ್ಹೂಂ ಅಝೀಝ್ ಬಲ್ನಾಡು ಸ್ಮರಣಾರ್ಥ ರಕ್ತದಾನ ಶಿಬಿರ

0

ಪುತ್ತೂರು: ಫ್ರೆಂಡ್ಸ್ ಕ್ಲಬ್ ಬಲ್ನಾಡು ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಜಂಟಿ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ಪುತ್ತೂರು ಸಹಾಭಾಗಿತ್ವದಲ್ಲಿ ಮರ್ಹೂಂ ಅಬ್ದುಲ್ ಅಝೀಝ್ ಬಲ್ನಾಡ್ ಸ್ಮರಣಾರ್ಥ ಸಾರ್ವಜನಿಕ ರಕ್ತದಾನ ಶಿಬಿರವು ಅ.27ರಂದು ಇಲ್ಲಿನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಆರ್‌ಜೆಎಂ ಬಲ್ನಾಡ್ ಖತೀಬರಾದ ಬಹು ಉಮರ್ ಅಝ್ಹರಿ ಉಸ್ತಾದ್ ದುವಾ ನೆರವೇರಿಸಿದರು. ಮಾಡನ್ನೂರು ಜುಮಾ ಮಸ್ಜಿದ್ ಖತೀಬ್ ಬಹು ಸಿರಾಜುದ್ದೀನ್ ಫೈಝೀ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅಝೀಝ್ ಅವರ ಸ್ಮರಣಾರ್ಥ ಈ ದಿನಕ್ಕೆ ಮಾತ್ರ ಸೀಮಿತವಾಗದೆ ಪ್ರತಿ ಸಂದರ್ಭಗಳಲ್ಲೂ ಅವರನ್ನು ಸ್ಮರಿಸುವಂತಾಗಬೇಕೆಂದು ಹೇಳಿದರು. ಸುರಿಬೈಲ್ ಕೇಂದ್ರ ಜುಮಾ ಮಸ್ಜಿದ್ ಖತೀಬರಾದ ಬಹು ಮೊಹಮ್ಮದ್ ಸಖಾಫಿ ಉಸ್ತಾದರು ಪ್ರಾಸ್ತವಿಕವಾಗಿ ಮಾತನಾಡಿದರು. ರೋಟರಿ ಕ್ಯಾಂಪ್ಕೋ ಬ್ಲಡ್ ಸೆಂಟರ್ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್ ರಕ್ತದಾನದ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ಆರ್‌ಜೆಎಂ ಬಲ್ನಾಡ್ ಆಡಳಿತ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ನಾಟೆಕಲ್, ಉಪಾಧ್ಯಕ್ಷ ಅಬ್ದುಲ್ ರಹ್ಮಾನ್ ಪಳ್ಳಿಕೆರೆ, ಪ್ರಾಧ್ಯಾಪಕ ಹಂಝ ಮದನಿ ಹಾಗೂ ಉಸ್ಮಾನ್ ಮುಸ್ಲಿಯಾರ್ ಬಲ್ನಾಡ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಿದ್ದೀಕ್ ಬೀಟಿಗೆ ನಿರೂಪಿಸಿದರು. ಒಟ್ಟು 44 ಮಂದಿ ರಕ್ತದಾನ ಮಾಡಿದರು.

LEAVE A REPLY

Please enter your comment!
Please enter your name here