ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ ಈಶ್ವರಮಂಗಲ ಹನುಮಗಿರಿ ವೈದೇಹಿ ಸಭಾಂಗಣದಲ್ಲಿ ನಡೆಯಿತು.
ವೇದಿಕೆಯಲ್ಲಿ ಶಾಸಕರಾದ ಸಂಜೀವ ಮಠಂದೂರು, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ,ಬೂಡಿಯಾರ್ ರಾಧಾಕೃಷ್ಣ ರೈ , ಮತ್ತು ಗ್ರಾಮಾಂತರ ಮಂಡಲದ ಪ್ರಭಾರಿ ರಾಮದಾಸ್ ಬಂಟ್ವಾಳ್ ಮತ್ತು, ವಿಶ್ವೇಶ್ವರ ಭಟ್ ಬಂಗಾರಡ್ಕ ಮುಂತಾದವರು ಉಪಸ್ಥಿತರಿದ್ದರು.ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು.