![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ದೀಪಗಳ ಹಬ್ಬ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.
ಸಂಸ್ಥೆಯ ಸಂಚಾಲಕ ರೆ.ಫಾ. ಹನಿ ಜೇಕಬ್ರವರು ದೀಪ ಬೆಳಗಿಸುವುದರ ಮೂಲಕ ಹಬ್ಬದ ಸಂಭ್ರಮಕ್ಕೆ ಚಾಲನೆ ನೀಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ಶಿಕ್ಷಕರಾದ ದಿಲೀಪ್ರವರು ದೀಪಾವಳಿ ಹಬ್ಬದ ಮಹತ್ವವನ್ನು ತಿಳಿಸಿದರು. ಉದನೆ ಸೈಂಟ್ ಆಂಟನೀಸ್ ಹೈಸ್ಕೂಲ್ ಹಾಗೂ ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಶಾಲೆಯ ಮುಖ್ಯಗುರುಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನೆಲ್ಯಾಡಿ ಗಣೇಶ್ ಸ್ಟೋರ್ ಮಾಲಕ ದಿನೇಶ್ ಎಂ.ಟಿ., ಹಾಗೂ ಪೂರ್ವವಿದ್ಯಾರ್ಥಿ ಅಜಿತ್ ಓರ್ಕಳರವರು ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವ್ಯವಸ್ಥೆ ಮಾಡಿದ್ದರು. ಅಜಿತ್ ಓರ್ಕಳರವರು ಪ್ರಾಯೋಜಿಸಿದ್ದ ಪಟಾಕಿಯನ್ನು ವಿದ್ಯಾರ್ಥಿಗಳೆಲ್ಲರೂ ಸಿಡಿಸಿ ಸಂಭ್ರಮಪಟ್ಟರು.