ತಾಲೂಕು ಮಟ್ಟದ ಛದ್ಮವೇಷ ಸ್ಪರ್ಧೆಯಲ್ಲಿ ಕೀರ್ತನಾ ಪ್ರಥಮ

0

ನಿಡ್ಪಳ್ಳಿ;  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಪುತ್ತೂರು ಮತ್ತು ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ಇದರ ಕನ್ನಡ ಮಾಧ್ಯಮ ಪ್ರೌಢ ಶಾಲಾ ವಿಭಾಗದಲ್ಲಿ ಅ.28 ರಂದು ಜರುಗಿದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕೀರ್ತನಾ  ಪ್ರಥಮ ಸ್ಥಾನ ಗಳಿಸಿರುತ್ತಾರೆ ಎಂದು ಶಾಲಾ ಸಂಚಾಲಕ ಮಹಾಬಲೇಶ್ವರ ಭಟ್ ತಿಳಿಸಿದ್ದಾರೆ.
ಇವರು ಸೂರಂಬೈಲು  ಉದಯಕುಮಾರ್ ಮತ್ತು ಲಲಿತಾ ದಂಪತಿಯ ಪುತ್ರಿ. ಕೀರ್ತನಾರಿಗೆ  ಶಾಲಾ ಗೌರವ ಗುಮಾಸ್ತರಾದ  ಎ.ಎನ್ ಕೊಳಂಬೆಯವರು ಮೇಕಪ್ ಮಾಡಿರುತ್ತಾರೆ. ಕೀರ್ತನಾ ಅವರು  ಸುಬೋಧ ಪ್ರೌಢಶಾಲೆಯಲ್ಲಿ ಜರುಗಿದ ಪುತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದರು.

LEAVE A REPLY

Please enter your comment!
Please enter your name here