ಮಂಗಳೂರಿನಲ್ಲಿ ಮಕ್ಕಳ ಮಾಸೋತ್ಸವ

0

ಪುತ್ತೂರು: ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದಕ್ಷಿಣ ಕನ್ನಡ ಜಿಲ್ಲೆ, ಪಡಿ ಮಂಗಳೂರು, ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರೋಶಿನಿ ನಿಲಯ, ಸ್ಕೂಲ್ ಆಫ್ ಸೋಷಿಯಲ್ ವರ್ಕ್ ಸಹಭಾಗಿತ್ವದಲ್ಲಿ ಅ.28ರಂದು ಮಕ್ಕಳ ಹಕ್ಕುಗಳ ಮಾಸೋತ್ಸವ ಕಾರ್ಯಕ್ರಮ ನಡೆಯಿತು.


ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ ಮಾಸೋತ್ಸವ ಉದ್ಘಾಟಿಸಿರು. ಉಳ್ಳಾಲ ಸಯ್ಯದ್ ಮದನಿ ದರ್ಗಾ ಅಧ್ಯಕ್ಷ ಹಾಜಿ ಯು.ಕೆ ಅಬ್ದುಲ್ ರಶೀದ್, ವಲಯ ಶಿಕ್ಷಣ ಸಂಪನ್ಮೂಲ ಅಧಿಕಾರಿ ತಹಸೀನ್, ಸುರೇಶ್ ರೈ, ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕಿ ಕಮಲಾ ಗೌಡ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜ ಮಾತನಾಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷೆ ನಯನಾ ರೈ ಸ್ವಾಗತಿಸಿದರು. ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇದರ ಅಧ್ಯಕ್ಷೆ ಹರಿಣಾಕ್ಷಿ ವಂದಿಸಿದರು. ಪಡಿ ಸಂಸ್ಥೆಯ ಸಂಯೋಜಕ ಸಿದ್ಧಾಂತ್ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here