ಕೊಂಬೆಟ್ಟು ಶಾಲೆಯ ಇಬ್ಬರು ವಿದ್ಯಾರ್ಥಿನಿಯರು ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0


ಪುತ್ತೂರು: ರಾಮಕುಂಜ ಶ್ರೀರಾಮಕುಂಜೇಶ್ವರ ಪ್ರೌಢಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೊಂಬೆಟ್ಟು ಸ.ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಇಲ್ಲಿನ ಇಬ್ಬರು ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಗೊಂಡಿದ್ದಾರೆ.

ಕೊಂಬೆಟ್ಟು ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿನಿ ಅಶ್ವಿತಾ ಎ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು, ಶ್ರೀಕೃಪಾ.ಎನ್ ರವರು ಸಂಸ್ಕೃತ ಧಾರ್ಮಿಕ ಪಠಣದಲ್ಲಿ ತೃತೀಯ ಬಹುಮಾನ ಪಡೆದು ಕೊಂಡಿದ್ದಾರೆ ಎಂದು ಉಪಪ್ರಾಂಶುಪಾಲ ವಸಂತ ಮೂಲ್ಯ ಇವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here