ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಅಣಂಗೂರು ಶ್ರೀ ಕೊರಗ ತನಿಯ ದೈವ ಸನ್ನಿಧಿಯಲ್ಲಿ ವಲಯ ಸಮಿತಿ ರಚನೆ

0

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ ಕಾಸರಗೋಡು ಅಣಂಗೂರುವಿನಲ್ಲಿ ವಲಯ ಸಮಿತಿಯ ರಚನೆ ಮಾಡಲಾಯಿತು. ಧರ್ಮದರ್ಶಿಗಳು ಕ್ಷೇತ್ರದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಸಹಕರಿಸುವಂತೆ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಕೊರಗ ತನಿಯ ದೈವ ಸನ್ನಿಧಿಯ ಧರ್ಮದರ್ಶಿ ಅನಿಲ್ ಅಣಂಗೂರುರವರು ನಮ್ಮ ವಲಯ ದಿಂದ ಕ್ಷೇತ್ರದ ಅಭಿವೃದ್ಧಿಯಲ್ಲಿ ಹಾಗೂ ನಮ್ಮವರಿಂದ ಶ್ರಮದಾನ ಮೂಲಕ ಸಹಕರಿಸುವುದಾಗಿ ಭರವಸೆ ನೀಡಿದರು. ಪುರುಷೋತ್ತಮ ಪಾರಕಟ್ಟ,ಮಿಥುನ್‌ ರಾಜ್, ಚಂದ್ರಹಾಸ ಮಣ್ಣಿಪ್ಪಾಡಿ, ಬಾಸ್ಕರ ಕೆ ಕಾಸರಗೋಡು, ಹರೀಶ್ ಕಾಮಜಾಲು , ರಘುರಾಮ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಲಯ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಧರ್ಮದರ್ಶಿ ಶ್ರೀ ಅನಿಲ್ ಅಣಂಗೂರು, ಅಧ್ಯಕ್ಷರಾಗಿ ಪುರುಷೋತ್ತಮ ಪಾರಕಟ್ಟ, ಉಪಾಧ್ಯಕ್ಷರುಗಳಾಗಿ ದೀಪಿಕಾ, ಸುರೇಶ್ ಪ್ರದಾನ ಕಾರ್ಯದರ್ಶಿ ಮಿಥುನ್ ರಾಜ್ ಕಾರ್ಯದರ್ಶಿಯಾಗಿ ಚಂದ್ರಹಾಸ ಮಣ್ಣಿಪ್ಪಾಡಿ, ಉದಯ ಕುಮಾರ್ ತಲಪ್ಪಾಡಿ, ಕೋಶಾಧಿಕಾರಿಯಾಗಿ ಅನೂಫ್ ಕೋಟೆಕಣಿ ಹಾಗೂ ಹಲವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಭಾಸ್ಕರ ಕೆ. ಕಾಸರಗೋಡು ಸ್ವಾಗತಿಸಿ ಮಿಥುನ್ ರಾಜ್ ವಂದಿಸಿದರು.

LEAVE A REPLY

Please enter your comment!
Please enter your name here