ಹಳೆಯ ಪ್ರಕರಣ:ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಪುತ್ತೂರು:ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ನ್ಯಾಯಾಲದಿಂದ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

2017ರಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ನೆಟ್ಟಣಿಗೆಮುಡ್ನೂರು ಗ್ರಾಮದ ಬಸಿರಡ್ಕ ಶ್ರೀನಿವಾಸ್ ಎಂಬವರ ಮಗ ಸಂದೇಶ್ ಕೆ.ಎಸ್.(32 ವರ್ಷ)ಬಂಧಿತ ಆರೋಪಿ. ಅ.28ರಂದು ವಿದೇಶದಿಂದ ಬಂದ ಆರೋಪಿಯನ್ನು ಮುಂಬೈಯ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದವರು ವಶಕ್ಕೆ ಪಡೆದುಕೊಂಡು ಪುತ್ತೂರು ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದರು.ಬಳಿಕ ಮುಂಬೈಯ ಸಹರ್ ಪೊಲೀಸ್ ಠಾಣೆಯಿಂದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಹೆಡ್‌ಕಾನ್‌ಸ್ಟೇಬಲ್ ದಯಾನಂದ ಮತ್ತು ಕಾನ್‌ಸ್ಟೇಬಲ್ ಗಿರೀಶ್‌ರವರು ವಶಕ್ಕೆ ಪಡೆದುಕೊಂಡು ಬಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here