ಪ್ರತಿಭಾ ಕುಳಾಯಿಯವರಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪ್ರಕರಣ; ಶ್ಯಾಮಸುದರ್ಶನ್ ನಿರೀಕ್ಷಣಾ ಜಾಮೀನು ಅರ್ಜಿ ಅ.31ರಂದು ವಿಚಾರಣೆ

0

ಪುತ್ತೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕಿಯೂ ಆಗಿರುವ ಪ್ರತಿಭಾ ಕುಳಾಯಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೇಸಿಗೆ ಒಳಗಾಗಿ ತಲೆಮರೆಸಿಕೊಂಡಿರುವ ಆರೋಪಿ, ಪುತ್ತೂರಿನ ಕಹಳೆ ನ್ಯೂಸ್ ಸಂಪಾದಕ ಶ್ಯಾಮಸುದರ್ಶನ್ ಭಟ್ ಹೊಸಮೂಲೆ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಅ.31ರಂದು ನಡೆಯಲಿದ್ದು ಅಲ್ಲಿಯವರೆಗೆ ಆರೋಪಿಯನ್ನು ಬಂಧಿಸದಂತೆ ನ್ಯಾಯಾಲಯ ಆದೇಶ ಮಾಡಿದೆ.

ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರಕಾರಿ ಅಭಿಯೋಜಕರು ಮಾಡಿರುವ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯ ಅ.31ರಂದು ಆಕ್ಷೇಪಣೆ ಸಲ್ಲಿಸಲು ಸರಕಾರಿ ಅಭಿಯೋಜಕರಿಗೆ ಸೂಚಿಸಿದೆ.

LEAVE A REPLY

Please enter your comment!
Please enter your name here