ಹಿರೇಬಂಡಾಡಿ ಅತ್ತಾಜೆಯಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ  ಮಲೆನಾಡು ಗಿಡ್ಡ ಹಸು, ಹೆಣ್ಣು ಕರು ಸಮರ್ಪಣೆ

0

ಪುತ್ತೂರು: ಹಿರೇಬಂಡಾಡಿ ಅತ್ತಾಜೆ ಗೋಪಾಲಕೃಷ್ಣ ಭಟ್ ಮತ್ತು ಮನೆಯವರು ಮಲೆನಾಡು ಗಿಡ್ಡ ಹಸು, ಹೆಣ್ಣು ಕರುವನ್ನು ಅ.31ರಂದು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಬಿ ಐತ್ತಪ್ಪ ನಾಯ್ಕ್, ರಾಮದಾಸ ಗೌಡ ಎಸ್, ರವೀಂದ್ರನಾಥ ರೈ ಬಳ್ಳಮಜಲು, ಶ್ರೀಮತಿ ವೀಣಾ ಬಿ ಕೆ, ಕಛೇರಿ ವ್ಯವಸ್ಥಾಪಕರಾದ ಹರೀಶ್ ಶೆಟ್ಟಿ, ಸಿಬ್ಬಂದಿಗಳಾದ ಪದ್ಮನಾಭ ಮತ್ತು ಬಳಗದವರ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕ ವೇ.ಮೂ ವಸಂತ ಕೆದಿಲಾಯರು ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರ ಪ್ರಸಾದ ನೀಡಿ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here