ದ.ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ನೇಮಕ

0

ಪುತ್ತೂರು: ಬೆಂಗಳೂರಿನ ರಾಜೀವ್ ಗಾಂಧಿ ಹೆಲ್ತ್ ಆಂಡ್ ಸೈನ್ಸ್ ಇದರ ರಿಜಿಸ್ಟ್ರಾರ್ ಆಗಿ ಕರ್ತವ್ಯದಲ್ಲಿದ್ದ ರವಿಕುಮಾರ್ ಎಂ.ಆರ್. ಅವರನ್ನು ದ.ಕ. ಜಿಲ್ಲಾಧಿಕಾರಿಯಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ದ.ಕ ಜಿಲ್ಲಾಧಿಕಾರಿಯಾಗಿದ್ದ ಕೆ.ವಿ. ರಾಜೇಂದ್ರ ಅವರನ್ನು ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾಯಿಸಿತ್ತು, ನಂತರ ದ. ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ಡಾ. ಕುಮಾರ್ ಅವರನ್ನು ಪ್ರಭಾರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಇದೀಗ ದ.ಕ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ರವಿಕುಮಾರ್ ಸೇರಿದಂತೆ ರಾಜ್ಯದಲ್ಲಿ ಒಟ್ಟು 8 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.

LEAVE A REPLY

Please enter your comment!
Please enter your name here