ಮುಂಡೂರು-1 ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಬೆಟ್ಟಂಪಾಡಿ: ನಿಡ್ಪಳ್ಳಿಯ ಮುಂಡೂರು ಸ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಕಾರ್ಯಕ್ರಮದ ಮೊದಲಿಗೆ ಭುವನೇಶ್ವರಿ ದೇವಿಯ ಭಾವಚಿತ್ರವನ್ನು ಮೆರವಣಿಗೆಯ ಮೂಲಕ  ವೇದಿಕೆಗೆ ತಂದು ಅಲಂಕರಿಸಿದ ಪೀಠದಲ್ಲಿ ಇಟ್ಟು ದೀಪ ಪ್ರಜ್ವಲನೆಯ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು .

ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಭಾಸ್ಕರ ಕರ್ಕೇರ, ಶಾಲಾ‌ ಮುಖ್ಯಗುರು ಆಶಾ ಎಸ್., ಅಂಗನವಾಡಿ ಕಾರ್ಯಕರ್ತೆ  ದೇವಕಿ ಉಪಸ್ಥಿತರಿದ್ದರು. ಶಾಲೆಯ ಮಕ್ಕಳಿಗೆ ಕನ್ನಡ ಕವಿ ಮತ್ತು ಸಾಹಿತಿಗಳ ಹೆಸರನ್ನು ಬರೆಯುವುದು, ಒಗಟುಗಳ ಸಂಗ್ರಹ ಮತ್ತು ಕನ್ನಡ ಗೀತೆಗಳನ್ನು ಹಾಡುವುದು, ಕನ್ನಡ ಬಾವುಟ ಚಿತ್ರಿಸುವುದು ಇತ್ಯಾದಿ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಿಸಲಾಯಿತು. ಶಾಲಾ ಶಿಕ್ಷಕರಾದ  ಸಾವಿತ್ರಿ ಟಿ.,  ಸೌಮ್ಯ, ಕು.ರಶ್ಮಿತಾ ಮತ್ತು ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು, ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ ಅಧ್ಯಕ್ಷರ ವತಿಯಿಂದ ಸಿಹಿ ತಿಂಡಿಗಳನ್ನು ವಿತರಿಸಿದರು.

LEAVE A REPLY

Please enter your comment!
Please enter your name here