ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಪುತ್ತೂರು:  ‘ಕನ್ನಡ ಭಾಷೆ ಕನ್ನಡಿಗರ ಉಸಿರು. ಕನ್ನಡವನ್ನು ಬಳಸಿಕೊಂಡು ಬೆಳವಣಿಗೆಯನ್ನು ಕನ್ನಡಿಗರು ಕಾಣಬೇಕು. ಕುರುಡು ಅಭಿಮಾನ ಸಲ್ಲದು. ಅನ್ನದ ಹುಡುಕಾಟದಲ್ಲಿ ಕನ್ನಡವನ್ನು ಎಂದೂ ನಿರ್ಲಕ್ಷ್ಯ ಮಾಡಬಾರದು.’ಎಂದು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಗಣರಾಜ ಕುಂಬ್ಳೆ ನುಡಿದರು.

ಅವರು ರಾಮಕುಂಜೇಶ್ವರ ಮಹಾವಿದ್ಯಾಲಯದಲ್ಲಿ ನಡೆದ ಅರುವತ್ತೇಳನೆಯ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದರು.ಉಪನ್ಯಾಸಕ ಕುಸುಮಾಧರ್ ಸ್ವಾಗತಿಸಿ ವಂದಿಸಿದರು. ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅನಂತರ ವಿದ್ಯಾರ್ಥಿಗಳು ಕಾಲೇಜಿನ ಪರಿಸರವನ್ನು ಸ್ವಚ್ಛಗೊಳಿಸುವ ಸೇವಾ ಕಾರ್ಯಕ್ರಮವನ್ನು ನಡೆಸಿದರು.

LEAVE A REPLY

Please enter your comment!
Please enter your name here