ಕನ್ನಡ ರಾಜ್ಯೋತ್ಸವ ಸಂಭ್ರಮ-ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ 2022

0

ಪುತ್ತೂರು: ಯುಗಪುರುಷ ಕಿನ್ನಿಗೋಳಿ ನೇತೃತ್ವದಲ್ಲಿ ಯುಗಪುರುಷ ಸಭಾಭವನದಲ್ಲಿ ಕಥಾಬಿಂದು ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ವಾಯ್ಸ್ ಆಫ್ ಆರಾಧನಾ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಾಂಸ್ಕೃತಿಕ ಸಂಭ್ರಮದಲ್ಲಿ ಶಾಂತಾ ಪುತ್ತೂರು ರವರನ್ನು ಸಾಹಿತ್ಯ ಸೇವೆಗಾಗಿ ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ 2022 ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು, ಯುಗಪುರುಷ ಕಿನ್ನಿಗೋಳಿಯ ಸಂಪಾದಕ ಭುವನಾಭಿರಾಮ ಉಡುಪ, ದೈಜಿವರ್ಲ್ಡ್ ನ ಡೈರೆಕ್ಟರ್ ಹೇಮಾಚಾರ್ಯ, ಶ್ರೀ ಧನಲಕ್ಷ್ಮಿ ಕ್ಯಾಶ್ಶೂ ಇಂಡಸ್ಟ್ರೀಸ್ ಮೂಡಬಿದ್ರೆಯ ಶ್ರೀಪತಿ ಭಟ್, ಲೇಖಕರು ಕಾದಂಬರಿಕಾರ ಪಿ.ವಿ.ಪ್ರದೀಪ್ ಕುಮಾರ್, ವಾಯ್ಸ್ ಆಫ್ ಆರಾಧನಾ ಸಂಸ್ಥಾಪಕರಾದ ಪದ್ಮಶ್ರೀ ಭಟ್ ನಿಡ್ಡೋಡಿ, ಪತ್ರಕರ್ತ ಡಾ.ಶೇಖರ ಅಜೆಕಾರು, ಚಂದ್ರಶೇಖರ ನಾವಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here