ಪುತ್ತೂರು : ಉಡುಪಿಯ ಹೆಬ್ರಿಯಲ್ಲಿ ನಡೆದ ವಿದ್ಯಾ ಭಾರತಿ ಪ್ರಾಂತ ಹಾಗು ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೈಝೆನ್ ಎಸ್(ಬಂಟ್ವಾಳದ ದೇವಸ್ಯ ಸೂರ್ಯನಾರಾಯಣ ಎನ್ ಕೆ ಮತ್ತು ಸುಮನ ಎಸ್ ಎನ್ ದಂಪತಿ ಪುತ್ರ) ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಋತ್ವಿಕ್ ಸಾಯಿ ಗಣೇಶ್(ಕುಂದಾಪುರದ ತಾಲೂಕಿನ ಸಿದ್ದಾಪುರದ ಜನಾರ್ಧನ ಎಂ.ಆರ್ ಮತ್ತು ಜ್ಯೋತಿ ಕೆ.ಸಿ ದಂಪತಿ ಪುತ್ರ)ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.