ಪೆರ್ನೆ: ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಉಪ್ಪಿನಂಗಡಿ: ಬಂಟ್ವಾಳ ತಾಲೂಕಿನ ಪೆರ್ನೆ- ಬಿಳಿಯೂರು, ಕಳೆಂಜ- ದೇತಂಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಡಿ.25ರಿಂದ ಡಿ.30ರವರೆಗೆ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಹಾರೈಸಿದರು.


ಈ ಸಂದರ್ಭ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಬಿ. ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಗೌರವಾಧ್ಯಕ್ಷ ಭರತ್ ಕುಮಾರ್ ಅರಿಗ ಪಟ್ಟೆಗುತ್ತು, ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ರೋಹಿತಾಕ್ಷ ಬಾಣಬೆಟ್ಟು, ಆಡಳಿತ ಸಮಿತಿಯ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎಸ್., ದೇವಾಲಯದ ಅಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷ ಅವಿನಾಶ್ ಜೈನ್ ಪರಂಗಾಜೆ, ಕಾರ್ಯದರ್ಶಿ ರಮೇಶ್ ತೋಟ, ಜೊತೆ ಕಾರ್ಯದರ್ಶಿಪ್ರತಿಮಾ ಎಸ್. ನಾಯಕ್ ಮೈರ, ಉಪಾಧ್ಯಕ್ಷ ಚಂದಪ್ಪ ಪೂಜಾರಿ ಕೆಳಗಿನಮನೆ, ಸದಸ್ಯ ಅಶೋಕ್ ಕುಮಾರ್ ಮುಳಿಪಡ್ಪು, ಗೋಪಾಲ ಸಪಲ್ಯ ಬೆದ್ರ, ಆಡಳಿತ ಸಮಿತಿಯ ಶ್ರೀಧರ ಗೌಡ, ಸುರೇಶ್ ಆಚಾರ್ಯ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಕೇಶವ ಸುಣ್ಣಾನ, ಜೊತೆ ಕಾರ್ಯದರ್ಶಿ ಸುದೀಪ್ ಪದಬರಿ, ರಾಜೇಶ್ ಸಪಲ್ಯ ಮತ್ತಿತರರು ಉಪಸ್ಥತರಿದ್ದರು.

LEAVE A REPLY

Please enter your comment!
Please enter your name here