ದೂಮಡ್ಕ: ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

0

ಪುತ್ತೂರು: ಕೂಲಿ ಕಾರ್ಮಿಕ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.3ರಂದು ಇರ್ದೆ ಗ್ರಾಮದ ದೂಮಡ್ಕ ಜೋಗಿಮೂಲೆ ಎಂಬಲ್ಲಿ ನಡೆದಿದೆ.
ಇರ್ದೆ ಜೋಗಿಮೂಲೆ ದಿ.ಈಶ್ವರ ನಾಯ್ಕರವರ ಪುತ್ರ ವಿಶ್ವನಾಥ ನಾಯ್ಕ(35ವ.) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕಾರ್ಮಿಕರಾಗಿದ್ದ ವಿಶ್ವನಾಥ ನಾಯ್ಕರವರು ತನ್ನ ಮನೆ ಸಮೀಪವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವನಾಥ ನಾಯ್ಕ ಹಾಗೂ ಅವರ ಪತ್ನಿ ಮಧ್ಯೆ ಕೌಟುಂಬಿಕ ಕಲಹಗಳು ನಡೆಯುತ್ತಿತ್ತು. ಈ ಬಗ್ಗೆ ಪ್ರಮುಖರು ಸೇರಿ ಮಾತುಕತೆ ನಡೆಸಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ಪತ್ನಿ ಪ್ರಭಾ, ಸಹೋದರ ರಮೇಶ್ ರವರನ್ನು ಅಗಲಿದ್ದಾರೆ. ಮೃತರ ಮನೆಗೆ ತಾ.ಪಂ. ಮಾಜಿ ಅಧ್ಯಕ್ಷ ಶಂಭು ಭಟ್ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here