ಕುಂಬ್ರ: ದಂಪತಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

0


ಪುತ್ತೂರು: ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ದಂಪತಿ ಅದೃಷ್ಟವಶಾತ್ ಪಾರಾದ ಘಟನೆ ನ.೫ರಂದು ಕುಂಬ್ರ ಸಮೀಪದ ಕೊಲ್ಲಾಜೆಯಲ್ಲಿ ನಡೆದಿದೆ. ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ಉಪ್ಪಿನಂಗಡಿಯ ಗೋಪಾಲಕೃಷ್ಣ ಭಟ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಮಾರುತಿ ಕಾರು ಕೊಲ್ಲಾಜೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗೆ ಪಲ್ಟಿಯಾಗಿದ್ದು ಕಾರು ಚಲಾಯಿಸುತ್ತಿದ್ದ ಗೋಪಾಲಕೃಷ್ಣ ಭಟ್ ಹಾಗೂ ಅವರ ಪತ್ನಿ ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here