ವಿಹಿಂಪದಿಂದ ದೇಶಾದ್ಯಂತ ಹಿತ ಚಿಂತಕ ಅಭಿಯಾನ

0

ಪುತ್ತೂರು ಗ್ರಾಮಾಂತರ ಪ್ರಖಂಡದಲ್ಲಿ ಚಾಲನೆ

ಪುತ್ತೂರು: ವಿಶ್ವ ಹಿಂದು ಪರಿಷದ್ ವತಿಯಿಂದ ದೇಶಾದ್ಯಂತ ಹಿತ ಚಿಂತಕ ಅಭಿಯಾನ ಇಂದು ಆರಂಭಗೊಂಡಿದ್ದು, ಇದರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಗ್ರಾಮಾಂತರ ಪ್ರಖಂಡದಲ್ಲಿ ನಡೆಯುವ ಅಭಿಯಾನವನ್ನು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಎಸ್ ಬಿ ಜಯರಾಮ್ ರೈ ಬಳಜ್ಜ ಉದ್ಘಾಟಿಸಿದರು.
ಈ ಸಂದರ್ಭ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ಪ್ರಗತಿಪರ ಕೃಷಿಕ ಕಡಮಜಲು ಸುಭಾಷ್ ರೈ, ವಿಹಿಂಪ ಪುತ್ತೂರು ಗ್ರಾಮಾಂತರ ಪ್ರಖಂಡ ಕಾರ್ಯದರ್ಶಿ ರವಿಕುಮಾರ್ ಕೈತ್ತಡ್ಕ, ಬಜರಂಗದಳ ಸಂಯೋಜಕ ವಿಶಾಖ್ ಸಸಿಹಿತ್ಲು, ಕೆಯ್ಯೂರು ಘಟಕದ ಅಧ್ಯಕ್ಷ ಚರಣ್ ಸಣಂಗಳ, ಅಜಿತ್ ಕೆಯ್ಯೂರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here