ಯೋಗಾಸನದಲ್ಲಿ ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0

ಕಾಣಿಯೂರು: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಇವರು ನಡೆಸಿದ ಮೈಸೂರು ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆಯನ್ನು ರಾಜಾ0ಗಣ ಶ್ರೀ ಕೃಷ್ಣಮಠ, ಉಡುಪಿಯಲ್ಲಿ ನ 6ರಂದು ನಡೆದ ಯೋಗಾಸನದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

9 ರಿಂದ 14 ವಯೋಮಿತಿ ಬಾಲಕರ ವಿಭಾಗದಲ್ಲಿ ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನ ಮೋನಿಷ್ ತಂಟೆಪ್ಪಾಡಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಸುಳ್ಯ ತಾಲೂಕಿನ ಕಳಂಜ ಗ್ರಾಮದ ತಂಟೆಪ್ಪಾಡಿ ವಿಶ್ವನಾಥ ಮತ್ತು ದಯಾಮಣಿ ದಂಪತಿಗಳ ಪುತ್ರ . ಬಾಲಕಿಯರ ವಿಭಾಗದಲ್ಲಿ ಶ್ರೀಮಾ ಕೆ. ಎಚ್ ಪಂಚಮ ಸ್ಥಾನ ಗಳಿಸಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಗೌಡ ಮತ್ತು ಸುಜೀತ ದಂಪತಿಗಳ ಪುತ್ರಿ.

ನವಂಬರ್ 19 ರಿಂದ 21 ವರೆಗೆ ವಿಜಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಗೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಇವರಿಗೆ ತರಬೇತು ನೀಡಿರುತ್ತಾರೆ.

ಇವರನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಜಗನ್ನಾಥ ರೈ ನುಳಿಯಾಲು, ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ , ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ ,ಮುಖ್ಯಗುರು ಸರಸ್ವತಿ.ಎಂ ಮತ್ತು ಎಲ್ಲಾ ಶಿಕ್ಷಕ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here