ನಾಳೆ ಪುತ್ತೂರು-ಉಪ್ಪಿನಂಗಡಿ ರಸ್ತೆ ಕಾಮಗಾರಿ ಅವ್ಯವಸ್ಥೆ ಖಂಡಿಸಿ ಬೆಳ್ಳಿಪ್ಪಾಡಿ ಕ್ರಾಸ್ ಬಳಿ ಪ್ರತಿಭಟನೆ

0

ಪುತ್ತೂರು: ಪುತ್ತೂರು- ಉಪ್ಪಿನಂಗಡಿ ರಸ್ತೆ ಕಾಮಗಾರಿ ಪ್ರಾರಂಭವಾಗಿ ಎರಡು ವರ್ಷ ಆಗುತ್ತಾ ಬಂದರೂ ಇಷ್ಟರವರೆಗೆ ಕಾಮಗಾರಿ ಕೆಲಸ ಮುಗಿಸದ ಕಾರಣ ರಸ್ತೆಯಲ್ಲಿ ಹೋಗಲು ಅನಾನುಕೂಲವಾಗಿದೆ. ಅಲ್ಲದೆ ಅಪಘಾತ ನಡೆದಿದೆ. ಇನ್ನು ಮುಂದಕ್ಕೂ ಅಪಘಾತ ಆಗುವ ರೀತಿಯ ವ್ಯವಸ್ಥೆ ಇದೆ. ರಸ್ತೆ ಕಾಮಗಾರಿ ಮುಗಿಸದೆ ಜನ ಸಾಮಾನ್ಯರನ್ನು ಸತಾಯಿಸಲಾಗುತ್ತಿದೆ. ಆದ್ದರಿಂದ ಕೂಡಲೇ ಈ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ನ.7ರಂದು ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ‌ ನೇತೃತ್ವದಲ್ಲಿ‌ ಕೋಡಿಂಬಾಡಿಯ ಬೆಳ್ಳಿಪ್ಪಾಡಿ ಕ್ರಾಸ್ ಪ್ರತಿಭಟನೆ ನಡೆಸಲಾಗುವುದು ಎಂದು‌‌ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಚಾಲಕ ರೂಪೇಶ್ ರೈ ಅಲಿಮಾರ ತಿಳಿಸಿದ್ದಾರೆ.‌

LEAVE A REPLY

Please enter your comment!
Please enter your name here