ವಿಟ್ಲ: ಹಳೇ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ವಿಟ್ಲ: ಹಳೇ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರ ತಂಡ ವಶಕ್ಕೆ ಪಡೆದಿದೆ.

ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ ದಂಡಿಗನ ಹೋಬಳಿ ದೊಡ್ಡಕೆರೆ ದೇರುಹಳ್ಳಿ ನಿವಾಸಿ ಹನುಮೆ ಗೌಡರವರ ಪುತ್ರ ವಸಂತ ಡಿ.ಹೆಚ್. ಬಂಧಿತ ಆರೋಪಿಯಾಗಿದ್ದಾರೆ. ವಸಂತರವರ ವಿರುದ್ಧ 2005ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿತ್ತು. ಬಳಿಕದ ದಿನಗಳಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ಪತ್ತೆಗೆ ವಾರಂಟ್ ಜಾರಿ ಮಾಡಿತ್ತು.

ಆರೋಪಿಯ ಬಗ್ಗೆ ಮಾಹಿತಿ ಅರಿತ ವಿಟ್ಲ ಠಾಣಾ ಇನ್ಸ್ ಪೆಕ್ಟರ್ ಹೆಚ್.ಇ. ನಾಗರಾಜ್ ರವರ ನೇತೃತ್ವದಲ್ಲಿ ಎ.ಎಸ್.ಐ.ಜಯರಾಮ, ಸಿಬ್ಬಂದಿ ಪುನೀತ್ ರವರು ಹಾಸನ‌ಜಿಲ್ಲೆಯ ವಿದ್ಯಾನಗರದಿಂದ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

LEAVE A REPLY

Please enter your comment!
Please enter your name here