ಅಕ್ಷಯ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

0

ಪುತ್ತೂರು :ನ.5 ರಂದು ಅಕ್ಷಯ ಕಾಲೇಜು, ಸಂಪ್ಯ ಪುತ್ತೂರಿನಲ್ಲಿ ಅಕ್ಷಯ ವೈಭವ ಕಾರ್ಯಕ್ರಮದಡಿಯಲ್ಲಿ ದೀಪಾವಳಿ ಸಂಭ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವರಾದಕೋಟಾ ಶ್ರೀನಿವಾಸ್ ಪೂಜಾರಿಯವರು ಭಾಗವಹಿಸಿ, ಕಾಲೇಜಿನ ವೃತ್ತಿಪರ ಪದವಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲೂ ಇನ್ನೂ ಹಲವು ವೃತ್ತಿಪರ ಕೋರ್ಸ್‌ಗಳನ್ನು ಪ್ರಾರಂಭಿಸಲು ಸಲಹೆ ನೀಡಿದರು. ಅಲ್ಲದೇ ಕಾಲೇಜು ಕಟ್ಟಡವನ್ನು ವಿನ್ಯಾಸಗೊಳಿಸಿರುವ ರೀತಿಯನ್ನು ಪ್ರಶಂಸೆ ವ್ಯಕ್ತಪಡಿಸಿದರು. ಹಾಗೂ ಇವರೊಂದಿಗೆ ಈ ಸಂದರ್ಭದಲ್ಲಿ ಕಾಲೇಜಿನ ಅಧ್ಯಕ್ಷರಾದ  ಜಯಂತ್ ನಡುಬೈಲು, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಹಾಗೂ ಎಲ್ಲಾ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಂಭ್ರಮದಿಂದ ದೀಪಾವಳಿ ಆಚರಿಸಿದರು.

LEAVE A REPLY

Please enter your comment!
Please enter your name here