ರಾಷ್ಟ್ರ ಮಟ್ಟದ ಕರಾಟೆಯಲ್ಲಿ ವಿವೇಕಾನಂದ ಆ.ಮಾ.ಶಾಲಾ ವಿದ್ಯಾರ್ಥಿ ಪ್ರಮಥ ಎಂ. ಭಟ್ ಪ್ರಥಮ

0

ಪುತ್ತೂರು : ಉಡುಪಿಯ ಥಂಡರ್ ಗ್ರ್ಯಾಂಡ್ ಹಾಲ್‌ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಸ್ಪರ್ಧಾಕೂಟದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಪ್ರಮಥ ಎಂ. ಭಟ್ (ಮೈತ್ರಿ ಎಲೆಕ್ಟ್ರಿಕಲ್ಸ್‌ನ ಮಾಲಕ ರವಿನಾರಾಯಣ ಎಂ. ಹಾಗೂ ಶರಾವತಿ ದಂಪತಿ ಪುತ್ರ) ರವರು ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. Institute of Karate And Martial Arts (MRNC) ಪುತ್ತೂರು ಶಾಖೆಯ ವಿದ್ಯಾರ್ಥಿಯಾಗಿರುವ ಇವರು ಮುಖ್ಯ ಶಿಕ್ಷಕರಾದ ನಿತಿನ್ ಎನ್. ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್‌ರವರಿಂದ ತರಬೇತಿ ಪಡೆಯುತ್ತಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here