ದಿ. ಬಾಬಣ್ಣ ರೈ ನೀರ್ಪಾಡಿ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷರ ಭೇಟಿ

0

ಪುತ್ತೂರು: ಇತ್ತೀಚೆಗೆ ದೈವಾಧೀನರಾದ ಒಳಮೊಗ್ರು ಗ್ರಾಮ ಪಂಚಾಯತಿ ಮಾಜಿ ಉಪಾಧ್ಯಕ್ಷರು ಹಾಗೂ ಬಿಜೆಪಿಯ ಹಿರಿಯ ಕಾರ್ಯಕರ್ತರಾದ ನೀರ್ಪಾಡಿ  ಬಾಬಣ್ಣ ರೈ ಇವರ ಮನೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ ಭೇಟಿ ನೀಡಿದರು.
ಹಾಗೂ ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ಮತ್ತು ಕಸ್ತೂರಿ ಪಂಜ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಬುಡಿಯಾರು ರಾಧಾಕೃಷ್ಣ ರೈ ಜಿಲ್ಲಾ ಕಾರ್ಯದರ್ಶಿ ಜಯಶ್ರೀ ಕರ್ಕೇರ ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಎಸ್ಟಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ, ಶಕ್ತಿ ಕೇಂದ್ರ ಪ್ರಮುಖರಾದ ರಾಜೇಶ್ ರೈ ಪುರ್ಪುoಜಾ ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತಾರು, ಹಾಗೂ ಪುಲಾಸ್ಯ ರೈ ಮಹೇಶ್ ರೈ ಕೇರಿ, ರಾಧಾ ಕೃಷ್ಣ ಶೆಟ್ಟಿ ಕಲ್ಲಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here