ಹಿಂದೂ ಪದ ಕುರಿತು ನೀಡಿದ ಹೇಳಿಕೆ ಖಂಡಿಸಿ ಪುತ್ತೂರು ಬಿಜೆಪಿಯಿಂದ ಪ್ರತಿಭಟನೆ

0

ಸತೀಶ ಜಾರಕಿಹೊಳಿ ಕೂಡಲೇ ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು. ಹಿಂದೂಗಳ ಕ್ಷಮೆ ಕೇಳಬೇಕು, ಅವರ ಮಂಪರು ಪರೀಕ್ಷೆ ಮಾಡಬೇಕು,ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ ಬಿಜೆಪಿ

ಪುತ್ತೂರು: ‘ಹಿಂದೂ’ ಪದ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೀಡಿದ ಹೇಳಿಕೆ ಖಂಡಿಸಿ ಪುತ್ತೂರು ಬಿಜೆಪಿ ಗ್ರಾಮಾಂತರ ಮತ್ತು ನಗರಮಂಡಲದ ವತಿಯಿಂದ ಬಿಜೆಪಿ ಕಾರ್ಯಕರ್ತರು ನ.9 ರಂದು ಪುತ್ತೂರು ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸತೀಶ ಜಾರಕಿಹೊಳಿ ಕೂಡಲೇ ತಮ್ಮ ಹೇಳಿಕೆ ಹಿಂದಕ್ಕೆ ಪಡೆಯಬೇಕು. ಹಿಂದೂಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.


ಶಾಸಕ ಸಂಜೀವ ಮಠಂದೂರು, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ,ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್, ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಶಾಂತಿವನ, ಜಯಶ್ರೀ ಎಸ್ ಶೆಟ್ಟಿ, ರಾಜೇಶ್ ಬನ್ನೂರು, ಡಾ.ಕೃಷ್ಣ ಪ್ರಸನ್ನ, ಹೆಚ್ ಉದಯ, ಯು ಲೋಕೇಶ್ ಹೆಗ್ಡೆ, ಸತೀಶ್ ನಾಕ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶರಾವತಿ, ಬಜರಂಗದಳದ ಮುರಳಿಕೃಷ್ಣ ಹಸಂತಡ್ಕ, ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ,ಹರೀಶ್ ಬಿಜತ್ರೆ, ಹರಿಪ್ರಸಾದ್ ಯಾದವ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ಜಗದೀಶ್ ಶೆಣೈ ಸಹಿತ ನಗರಸಭೆ ಬಿಜೆಪಿ ಸದಸ್ಯರು, ಹಿಂದು ಸಂಘಟನೆ ಪದಾಧಿಕಾರಗಳು,ಹಲವಾರು ಮಂದಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here