ಅಳಿಕೆಯಲ್ಲಿ ತಾಯಿ, ಅಣ್ಣನ ಕೊಲೆಯತ್ನ ಪ್ರಕರಣ: ಆರೋಪಿಯ ಬಂಧನ

0

ವಿಟ್ಲ: ತಾಯಿ ಮತ್ತು ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನಿಸಿದ್ದ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವುದಾಗಿ ಮಾಹಿತಿ ಲಭಿಸಿದೆ.
ಅಳಿಕೆ ಗ್ರಾಮದ ನೆಗಳಗುಳಿ ನಿವಾಸಿ ಹರೀಶ್ ಬಂಧಿತ ಆರೋಪಿ. ನ.8ರಂದು ರಾತ್ರಿ ವೇಳೆ ಕುಡಿತದ ಮತ್ತಿನಲ್ಲಿದ್ದ ಹರೀಶ್ ಅವರ ತಾಯಿ ವಾರಿಜ ಹಾಗೂ ಸಹೋದರ ಕೃಷ್ಣ ಕುಮಾರ್‌ರವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ತಾಯಿ, ಮಗ ಆಸ್ಪತ್ರೆಯಲ್ಲಿ ದಾಖಲಾಗಿ ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಹರೀಶ್‌ನನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here