ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ ವಿವೇಕಾನಂದ ಆ.ಮಾ. ಶಾಲೆಯ ಅನ್ನಿಕಾ ಎಂ. ರಾಷ್ಟ್ರಮಟ್ಟಕ್ಕೆ

0

ಪುತ್ತೂರು : ವಿದ್ಯಾಭಾರತಿ ಕರ್ನಾಟಕ, ಹಾಗೂ ಬಾಲಭಾರತಿ ವಿದ್ಯಾಲಯ, ಬಳ್ಳಾರಿ ಇದರ ಜಂಟಿ ಆಶ್ರಯದಲ್ಲಿ ಬಾಲಭಾರತಿ ವಿದ್ಯಾಲಯ ಬಳ್ಳಾರಿ ಕ್ರೀಡಾಂಗಣದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ರಾಜ್ಯವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 9ನೇ ತರಗತಿ ವಿದ್ಯಾರ್ಥಿನಿ ಅನ್ನಿಕಾ ಎಂ.(ಚಾರ್ವಾಕ ಎ.ಎಸ್.ಐ ಕೃಷ್ಣಪ್ಪ ಎಂ. ಮತ್ತು ಶಿಕ್ಷಕಿ ವಾಣಿಶ್ರೀ ದಂಪತಿ ಪುತ್ರಿ) 3000 ಮೀಟರ್-ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ನ.19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here