ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ನ ಪುತ್ತೂರು ಘಟಕದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ನ.20 ರಂದು ಪುತ್ತೂರಿನಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೇಲ್ಕಾರ್ ನ ಪುತ್ತೂರು ಘಟಕದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ ನ.10ರಂದು ನಡೆಯಿತು.


ಕಲ್ಲೇಗ ಭಾರತ್ ಮಾತಾ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಹಿರಿಯ ವೈದ್ಯ ಚೇತನಾ ಆಸ್ಪತ್ರೆಯ ಡಾ.ಜೆ.ಸಿ.ಅಡಿಗ ಅವರು ಆಮಂತ್ರಣ ಪತ್ರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್, ಸಹ ಸಂಚಾಲಕ ಭಾಸ್ಕರ್ ಬಾರ್ಯ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಉಪಾಧ್ಯಕ್ಷ ಯು ಲೋಕೇಶ್ ಹೆಗ್ಡೆ, ಪುತ್ತೂರು ಘಟಕದ ಗೌರವಾಧ್ಯಕ್ಷ ಸಂಜೀವ ನಾಯಕ್ ಕಲ್ಲೇಗ, ಅಧ್ಯಕ್ಷ ಪುಳು ಈಶ್ವರ ಭಟ್, ಕಾರ್ಯಾಧ್ಯಕ್ಷ ಜಿ ಮಹಾಬಲ ರೈ ವಳತ್ತಡ್ಕ, ಸಂಚಾಲಕ ಎನ್ ಉಮೇಶ್ ಶೆಣೈ, ಕಾರ್ಯದರ್ಶಿ ಅನಾರು ಬಾಲಕೃಷ್ಣ ರಾವ್, ಸದಸ್ಯರಾದ ರಾಧಾಕೃಷ್ಣ ನಾಯಕ್, ಜಯಂತ, ಭವಾನಿ ಶಂಕರ್, ಕೆ ಉದಯ ಶಂಕರ್, ಚಂದ್ರಶೇಖರ್, ಭಾಸ್ಕರ ಎ , ಕಲಾವಿದ ಕೃಷ್ಣಪ್ಪ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here