ವಿಟ್ಲ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿ ನಾಪತ್ತೆ

0

ವಿಟ್ಲ: ಉದ್ಯೋಗ ಸಂದರ್ಶನಕ್ಕೆಂದು ತೆರಳಿದ ಯುವತಿಯೋರ್ವರು ಬಳಿಕ ಮನೆಗೆ ಮರಳಿ ಬಾರದೆ ನಾಪತ್ತೆಯಾಗಿರುವ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಕಂಬಳಬೆಟ್ಟು ದಿ. ಆನಂದ ರವರ ಪುತ್ರಿ ಸುಶ್ಮಿತಾ (21 ವ.) ನಾಪತ್ತೆಯಾದವರಾಗಿದ್ದಾರೆ. ನ 8 ರಂದು ಬೆಳಿಗ್ಗೆ ಕೆಲಸಕ್ಕೆ ಇಂಟರ್‌ವ್ಯೂ ಲೆಟರ್ ಬಂದಿದ್ದು, ಹಾಗಾಗಿ ನಾನು ಹೋಗಿ ಬರುತ್ತೇನೆ ಎಂದು ಮನೆಯವರಲ್ಲಿ ಹೇಳಿ ಹೋಗಿದ್ದ ಆಕೆ ರಾತ್ರಿಯಾದರೂ ಮನೆಗೆ ಮರಳಿ ಬಾರದೇ ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಗೆ ಕರೆ ಮಾಡಿದಾಗಲೂ ಮೊಬೈಲ್ ಸ್ವಿಚ್ಚ್ ಡ್ ಆಫ್ ಆಗಿದೆ. ನಾಪತ್ತೆಯಾಗಿರುವ ಸುಶ್ಮಿತಾರವನ್ನು ಪತ್ತೆ ಹಚ್ಚಿಕೊಡುವಂತೆ ಅವರ ಸಂಬಂಧಿ ಯಶ್ವಂತ್ ರವರು ವಿಟ್ಲ ಪೊಲೀಸ್ ಠಾಣೆಗೆ ನೀಡಿದ‌ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಾವಚಿತ್ರದಲ್ಲಿ ಕಾಣುವ ಯುವತಿಯನ್ನು ಯಾರಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ವಿಟ್ಲ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here