ವಿಹಿಂಪ ಹಿತ ಚಿಂತಕ ಅಭಿಯಾನದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ

0

ಪುತ್ತೂರು: ವಿಶ್ವ ಹಿಂದು ಪರಿಷದ್ ವತಿಯಿಂದ ಮೂರು ವರುಷಗಳಿಗೆ ಒಮ್ಮೆ ದೇಶಾದ್ಯಂತ ನಡೆಯುವ ಹಿತ ಚಿಂತಕ ಅಭಿಯಾನ ನ.6 ರಿಂದ 20ರವರೆಗೆ ಆರಂಭಗೊಂಡಿದ್ದು, ಇದರ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಪುತ್ತೂರಿನಲ್ಲಿ ಹಮ್ಮಿಕೊಂಡ ಅಭಿಯಾನದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿಯಾದರು.

ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ಅಧ್ಯಕ್ಷ ಕೆ. ಜೀವಂಧರ್ ಜೈನ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಅಳ್ವ, ದಿಶಾ ನಾಮನಿರ್ದೇಶಿತ ಸದಸ್ಯ ರಾಮ್ ದಾಸ್ ಹಾರಾಡಿ, ಪುರುಷೋತ್ತಮ ಮುಂಗ್ಲಿಮನೆ, ಗೌರಿ ಬನ್ನೂರು ಅಭಿಯಾನದಲ್ಲಿ ಜೊತೆಗೂಡಿದರು. ಈ ಸಂದರ್ಭದಲ್ಲಿ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳೀಕೃಷ್ಣ ಹಸಂತ್ತಡ್ಕ , ವಿಶ್ವ ಹಿಂದು ಪರಿಷದ್ ಜಿಲ್ಲಾ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ, ಜಿಲ್ಲಾ ಸೇವಾ ಪ್ರಮುಖ್ ಸೀತರಾಮ ಭಟ್, ಜಿಲ್ಲಾ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ್ ತೆಂಕಿಲ, ಬಜರಂಗದಳ ಪುತ್ತೂರು ನಗರ ಪ್ರಖಂಡ ಸಂಯೋಜಕ್ ಹರೀಶ್ ಕುಮಾರ್ ದೊಳ್ಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here