ರಾಜ್ಯಮಟ್ಟದ ಕರಾಟೆ ಸ್ಪರ್ಧೆ-ವೈಟ್ ಬೆಲ್ಟ್ ಕುಮಿಟೆ, ಕಟಾದಲ್ಲಿ ರಿಶಾನ್ ಸುರೇಶ್ ಪ್ರಥಮ

0

ಪುತ್ತೂರು:ಬಿ.ಸಿ ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಕರಾಟೆ ಸ್ಪರ್ಧಾಕೂಟದಲ್ಲಿ ಇನ್ಸ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್‌ನ ಪುತ್ತೂರು ಶಾಖೆಯ ವಿದ್ಯಾರ್ಥಿ ರಿಶಾನ್ ಸುರೇಶ್ ಸರಳಿಕಾನರವರು ವೈಟ್ ಬೆಲ್ಟ್ ಕುಮಿಟೆ ವಿಭಾಗದಲ್ಲಿ ಪ್ರಥಮ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.


ಬಪ್ಪಳಿಗೆ ಅಂಬಿಕಾ ವಿದ್ಯಾಲಯ ಸಿಬಿಎಸ್‌ಸಿರ ವಿದ್ಯಾರ್ಥಿಯಾಗಿರುವ ರಿಶಾನ್ ಸುರೇಶ್ ಇನ್ಸ್‌ಸ್ಟಿಟ್ಯೂಟ್ ಆಫ್ ಕರಾಟೆ ಆಂಡ್ ಮಾರ್ಷಲ್ ಆರ್ಟ್ಸ್‌ನ ಪುತ್ತೂರು ಶಾಖೆಯ ಮುಖ್ಯ ಶಿಕ್ಷಕ ನಿತಿನ್ ಎನ್. ಸುವರ್ಣರವರ ಮಾರ್ಗದರ್ಶನದಲ್ಲಿ ಶಿಕ್ಷಕ ಶಿವಪ್ರಸಾದ್‌ರವರಲ್ಲಿ ಐಕೆಎಂಎ ದರ್ಬೆ ಕೈಗಾರಿಕ ಭವನ ಹಾಲ್ ನಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರು ಬೆಟ್ಟಂಪಾಡಿ ಗ್ರಾ.ಪಂ ಸದಸ್ಯೆ ವಿದ್ಯಾಶ್ರೀ ಮತ್ತು ಸುರೇಶ್ ಗೌಡ ಸರಳಿಕಾನ ದಂಪತಿ ಪುತ್ರ.

LEAVE A REPLY

Please enter your comment!
Please enter your name here