ಆಲಂಕಾರು : ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಶ್ರೇಯಾ ಆಯ್ಕೆ

0

ಕಡಬ: ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ನೀಡುತ್ತಿರುವ ಎರಡನೇ ವರ್ಷದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕಡಬ ತಾಲೂಕಿನ ಆಲಂಕಾರು ಸಮೀಪದ ಪೆರಾಬೆ ಗ್ರಾಮದ ಶ್ರೇಯಾ ಎ.,ಆಯ್ಕೆಯಾಗಿದ್ದಾರೆ.

ಶ್ರೇಯಾ ಯಕ್ಷಗಾನ ನಾಟ್ಯ, ಭಾಗವತಿಕೆ, ಭರತನಾಟ್ಯ, ಯೋಗ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಈ ಸಾಧನೆ ಪರಿಗಣಿಸಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು 2022ನೇ ಸಾಲಿನ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಶ್ರೇಯಾರವರು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದಲ್ಲಿ ಪ್ರಥಮ ಪದವಿ ವಿದ್ಯಾರ್ಥಿನಿಯಾಗಿದ್ದಾರೆ. ಆಲಂಕಾರು ಶಾರದಾ ಜ್ಯುವೆಲ್ಲರ್‍ಸ್‌ನ ಮಾಲಕ ಯೋಗೀಶ್ ಆಚಾರ್ಯ ಹಾಗೂ ಶ್ಯಾಮಲಾ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here