ವಿದ್ಯಾಭಾರತಿ ಕ್ರೀಡಾಕೂಟದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಡಿಂಪಲ್ ಶೆಟ್ಟಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ಹಾಗೂ ಬಾಲ ಭಾರತಿ ವಿದ್ಯಾಲಯ ಬಳ್ಳಾರಿ ಇವರ ಜಂಟಿ ಆಶ್ರಯದಲ್ಲಿ ಬಾಲ ಭಾರತಿ ವಿದ್ಯಾಲಯ, ಬಳ್ಳಾರಿ ಕ್ರೀಡಾಂಗಣದಲ್ಲಿ ಅಕ್ಟೋಬರ್ 13, 14ರಂದು ಕರ್ನಾಟಕ ಆಂಧ್ರ ಪ್ರದೇಶ್ ತೆಲಂಗಾಣ ರಾಜ್ಯವನ್ನು ಒಳಗೊಂಡ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಡಿಂಪಲ್ ಶೆಟ್ಟಿ(ಮೆರ್ಲ ನಿವಾಸಿ ಉದಯ ಶೆಟ್ಟಿ ಮತ್ತು ಸುನೀತಾ ಶೆಟ್ಟಿ ದಂಪತಿ ಪುತ್ರಿ) – 100 ಮೀಟರ್ – ದ್ವಿತೀಯ, 4*100 ಮೀಟರ್ ರಿಲೇ –ಪ್ರಥಮ ಸ್ಥಾನ ಪಡೆದುಕೊಂಡಿದ್ದು,  ನವೆಂಬರ್ 19ರಿಂದ 23ರವರೆಗೆ ಹರಿಯಾಣದ ಕುರುಕ್ಷೇತ್ರದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ ಎಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here