ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್‌ನಿಂದ ವಿಶ್ವ ಮಧುಮೇಹ ದಿನಾಚರಣೆ – ಉಚಿತ ಆರೋಗ್ಯ ಕಾರ್ಡ್ ವಿತರಣೆ

0

ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್ ಮತ್ತು ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆಯು ನ.14ರಂದು ಬೊಳುವಾರು ಪ್ರಗತಿ ಹಾಸ್ಪಿಟಲ್ ಸಭಾಂಗಣದಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಉಚಿತ ಮಧುಮೇಹ ತಪಾಸಣಾ ಶಿಬಿರ ಮತ್ತು ಉಚಿತ ಆರೋಗ್ಯ ಕಾರ್ಡ್ ವಿತರಣೆಯನ್ನು ಉದ್ಘಾಟಿಸಿ ಮಾತನಾಡಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಂತಹ ಶಿಬಿರದ ಪ್ರಯೋಜನ ಪಡೆಯುವಂತೆ ತಿಳಿಸಿದರು. ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀಪತಿ ರಾವ್ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿ ಹಾಸ್ಪಿಟಲ್ ಎಜ್ಯುಕೇಶನ್ ಟ್ರಸ್ಟ್‌ನ ಉಪನ್ಯಾಸಕಿ ಚೈತ್ರ ಸ್ವಾಗತಿಸಿ, ಸಾರ್ವಜನಿಕ ಸಂಪರ್ಕಾಧಿಕಾರಿ ಸಂತೋಷ್ ರೈ ವಂದಿಸಿದರು.

LEAVE A REPLY

Please enter your comment!
Please enter your name here