ಬೋಳಂತೂರು: ಮಾರಕಾಸ್ತ್ರಗಳಿಂದ ಆಟೋ ಚಾಲಕನಿಗೆ ಹಲ್ಲೆ

0

ವಿಟ್ಲ: ಆಟೋ ಚಾಲಕನೋರ್ವನ ಮೇಲೆ ನಾಲ್ವರಿದ್ದ ತಂಡವೊಂದು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆ ಎಂಬಲ್ಲಿ ನಡೆದ ಬಗ್ಗೆ‌ ವರದಿಯಾಗಿದೆ.

ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ, ಆಟೋ ಚಾಲಕ ಶಾಕೀರ್(30 ವ.) ಗಾಯಗೊಂಡವರಾಗಿದ್ದು , ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಬಡ್ಡಿ ಮ್ಯಾಚ್ ಮುಗಿಸಿ ತಡರಾತ್ರಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಶಾಕೀರ್ ರನ್ನು ಬೋಳಂತೂರು ಸಮೀಪದ ನಾಡಾಜೆ ರಸ್ತೆಯಲ್ಲಿ ತಡೆದ ನಾಲ್ವರಿದ್ದ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಗಾಯಾಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here