ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ 69 ನೇ ಅಖಿಲ ಭಾರತ ಸಹಕಾರಿ ಸಪ್ತಾಹ

0

ಪುತ್ತೂರು:- ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆ ಕೆಮ್ಮಿಂಜೆ ಯಲ್ಲಿ 69 ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು “ಸಹಕಾರಿ ಸಂಸ್ಥೆಗಳ ಬೆಳವಣಿಗೆ ಮತ್ತು ಮುಂದಿನ ಭವಿಷ್ಯ” ಎಂಬ ಧ್ಯೇಯದೊಂದಿಗೆ ನಡೆಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಯಾಂಪ್ಕೋ ನಿಯಮಿತ ಮಂಗಳೂರು ಇದರ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಇವರು ನೆರವೇರಿಸಿದರು.
ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷ ರಾದ ವಾರಣಾಸಿ ಸುಬ್ರಾಯ ಭಟ್ ರವರ ಪುತ್ಥಳಿಗೆ ಹಾರಾರ್ಪಣೆ ಮಾಡಿ,ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು.
ವೇದಿಕೆಯಲ್ಲಿ ಶ್ಯಾಮ್ ಪ್ರಸಾದ್ ಎಚ್ (ಎ.ಜಿ.ಎಮ್ ಟೆಕ್ನಿಕಲ್), ಅನುಪ್ ಕೆ. ಯು(ಎ.ಜಿ.ಎಮ್ ಪ್ರೊಡಕ್ಸನ್), ರಂಗನಾಥ್ ಬಿ. ಜಿ(ಮೆನೇಜರ್ ಸೆಕ್ಯುರಿಟಿ ಉಪಸ್ಥಿತರಿದ್ದರು.
ರಾದೇಶ್ ಕುಂದಲ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here