ಮಠಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ-ಸನ್ಮಾನ

0

ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಸನ್ಮಾನ ಕಾರ್ಯಕ್ರಮ ಗ್ರಾ.ಪಂ. ಸದಸ್ಯರೂ ಆಗಿರುವ ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಗೀತಾ ಬಾಬು ಮೊಗೇರ ಮೋನಡ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿದ್ದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಮತ್ತು ಮಠದಬೆಟ್ಟುಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ನಾಗೇಶ್ ಶರ್ಮ ದೀಪ ಬೆಳಗಿಸಿ ಉದ್ಘಾಟಿಸಿದರು. ದಾನಿ ವಿಶ್ವನಾಥ ನಾಯ್ಕ ಕಿನ್ನೆತ್ತಿಪಳಿಕೆ, ಗ್ರಾ.ಪಂ. ಸದಸ್ಯರಾದ ಜಗನ್ನಾಥ ಶೆಟ್ಟಿ ನಡುಮನೆ, ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ, ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಪದ್ಮಲತಾ ಜೆ. ಶೆಟ್ಟಿ ನಡುಮನೆ ಮತ್ತು ಶ್ರೀ ಮಹಿಷಮರ್ದಿನಿ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಅಧ್ಯಕ್ಷೆ ಪುಷ್ಪಲತಾ ವಿ. ನಾಯಕ್ ಅತಿಥಿಗಳಾಗಿ ಭಾಗವಹಿಸಿದ್ದರು. ಅಂಗನವಾಡಿ ಪುಟಾಣಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಪುಟಾಣಿಗಳು ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಕ್ಕಳ ದಿನಾಚರಣೆ ಆಚರಿಸಿದರು. ಬಳಿಕ ೯೫ರ ಹರೆಯದ ನಾಟಿವೈದ್ಯೆ ಮಾಣಿಗ ಮೋನಡ್ಕರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಜಯಂತಿ ಡಿ. ಗೌಡ ಸ್ವಾಗತಿಸಿ, ಮನೀಷಾ ಶೆಟ್ಟಿ ಕೆದಿಕಂಡೆ ಮತ್ತು ನಿರ್ಮಲಾ ಶ್ರೀನಿವಾಸ ನಾಯ್ಕ ದಾಸಕೋಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here