ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ವರ್ಗ : ಡಾ|ಚಂದ್ರಗುಪ್ತ ನೂತನ ಐಜಿಪಿ

0

ಪುತ್ತೂರು: ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ಸೇರಿದಂತೆ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪಶ್ಚಿಮ ವಲಯ ಐಜಿಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇವಜ್ಯೋತಿ ರೇ ಅವರನ್ನು ಅಹವಾಲು ಮತ್ತು ಮಾನವ ಹಕ್ಕುಗಳ ವಿಭಾಗದ ಐಜಿಪಿಯಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಲಾಗಿದೆ.ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ|ಚಂದ್ರಗುಪ್ತ ಅವರನ್ನು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ ನೇಮಕಗೊಳಿಸಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಪಶ್ಚಿಮ ವಲಯ ಐಜಿಪಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಳ್ಳುತ್ತಿರುವ ದೇವಜ್ಯೋತಿ ರೇ ಮತ್ತು ಪಶ್ಚಿಮ ವಲಯದ ನೂತನ ಐಜಿಪಿಯಾಗಿ ವರ್ಗಾವಣೆಗೊಂಡಿರುವ ಡಾ|ಚಂದ್ರಗುಪ್ತ ಇವರೀರ್ವರೂ ಈ ಮೊದಲು ಪುತ್ತೂರಿನಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here