ಉಪ್ಪಳಿಗೆ ಕೂಲಿ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

0

ಪುತ್ತೂರು; ಕೃಷಿ ಕೂಲಿ ಕಾರ್ಮಿಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನ.14ರಂದು ಇರ್ದೆ ಉಪ್ಪಳಿಗೆಯಲ್ಲಿ ಸಂಜೆ ನಡೆದಿದೆ.

ಉಪ್ಪಳಿಗೆ ಶೀನ(43ವ.) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ನಿಡ್ಪಳ್ಳಿ ಗ್ರಾಮದ ಕುಕ್ಕುಪುಣಿ ನಿವಾಸಿಯಾಗಿರುವ ಶೀನರವರು ಕಳೆದ ಕೆಲ ಸಮಯಗಳಿಂದ ಉಪ್ಪಳಿಗೆ ಸಮೀಪ ಮನೆ ಮಾಡಿ ಪತ್ನಿ ಮಕ್ಕಳೊಂದಿಗೆ ವಾಸ್ತವ್ಯವಿದ್ದರು. ನ.14 ರಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಮನೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತರು ಪತ್ನಿ ಸವಿತಾ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here