ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ, ಮೆಟ್ರಿಕ್ ಮೇಳ, ಪ್ರಾಚ್ಯ ವಸ್ತು ಪ್ರದರ್ಶನ

0

ನೆಲ್ಯಾಡಿ: ಇಲ್ಲಿನ ಸಂತ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗಿಸ್‌ರವರು ನೆಹರುರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ವಿದ್ಯಾರ್ಥಿಗಳ ಸೃಜನಶೀಲತೆ ಮತ್ತು ಕೌಶಲ್ಯ ವರ್ಧನೆಗೆ ಪೂರಕವಾಗಿ ಮೆಟ್ರಿಕ್ ಮೇಳ, ವಿಜ್ಞಾನ ಮತ್ತು ಪ್ರಾಚ್ಯ ವಸ್ತುಗಳ ಪ್ರದರ್ಶನ ನಡೆಯಿತು. ಮೆಟ್ರಿಕ್ ಮೇಳವನ್ನು ನೆಲ್ಯಾಡಿ ವರ್ತಕರ ಸಂಘದ ಅಧ್ಯಕ್ಷ ರಫೀಕ್ ಸೀಗಲ್‌ರವರು ಉದ್ಘಾಟಿಸಿ ವಿದ್ಯಾರ್ಥಿಗಳ ಸ್ವಾವಲಂಬಿ ಬದುಕಿಗೆ ಈ ಮೇಳ ಸಹಕಾರಿಯಾಗಲಿ ಎಂದರು. ವಿದ್ಯಾರ್ಥಿಗಳೇ ತಯಾರಿಸಿ ಪ್ರದರ್ಶನಕ್ಕೆ ಇಟ್ಟ ವಿಜ್ಞಾನ ಮಾದರಿಗಳ ವಸ್ತು ಪ್ರದರ್ಶನವನ್ನು ನೆಲ್ಯಾಡಿಯ ಶಿಲ್ಪ ಕನ್‌ಸ್ಟ್ರಕ್ಷನ್ ಮಾಲಕ ಶಿವಣ್ಣ ಹೆಗ್ಡೆಯವರು ಉದ್ಘಾಟಿಸಿ ಹಾರೈಸಿದರು. ಪ್ರಾಚ್ಯ ವಸ್ತುಗಳ ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದ ಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗಿಸ್‌ರವರು ಮಾತನಾಡಿ, ಮರೆಯಾಗುತ್ತಿರುವ ಸಾಂಪ್ರದಾಯಿಕ ಪರಿಕರಗಳು ಮುಂದಿನ ಪೀಳಿಗೆಗೆ ಇತಿಹಾಸವನ್ನು ಮೆಲುಕು ಹಾಕುವ ವಸ್ತುಗಳಾಗಬೇಕು, ಅವುಗಳನ್ನು ಜೋಪಾನವಾಗಿ ರಕ್ಷಿಸುವ ಕೆಲಸವಾಗಬೇಕೆಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಆರ್. ವೆಂಕಟರಮಣ, ಸಂಸ್ಥೆಯ ಪ್ರಾಚಾರ್ಯ ಎಂ.ಕೆ. ಏಲಿಯಾಸ್, ಪ್ರೌಢಶಾಲಾ ವಿಭಾಗದ ಮುಖ್ಯಗುರುಗಳಾದ ಎಂ.ಐ. ತೋಮಸ್, ಹರಿಪ್ರಸಾದ್ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಸುಮಾರು 29ವಿವಿಧ ಸ್ಟಾಲ್‌ಗಳು ಗಮನ ಸೆಳೆದವು. ನೆಲ್ಯಾಡಿಯ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿಗಳು ವಸ್ತು ಪ್ರದರ್ಶನವನ್ನು ವೀಕ್ಷಿಸಿದರು. ಮೆಟ್ರಿಕ್ ಮೇಳದಲ್ಲಿ ವಿದ್ಯಾರ್ಥಿಗಳ ಸ್ಟಾಲ್‌ನಲ್ಲಿ ಭರ್ಜರಿ ವ್ಯಾಪಾರ ನಡೆಯಿತು.

LEAVE A REPLY

Please enter your comment!
Please enter your name here