ಶ್ರದ್ಧಾ ವಾಕರ್ ಹತ್ಯೆ ಖಂಡಿಸಿ ಹಿಂದು ಜನಜಾಗೃತಿ ಸಮಿತಿ ಪ್ರತಿಭಟನೆ

0

– ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ

ಪುತ್ತೂರು: ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆಯನ್ನು ಖಂಡಿಸಿ ಹಿಂದು ಜನಜಾಗೃತಿ ಸಮಿತಿಯಿಂದ ನ.17 ರಂದು ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.


ಹಿಂದು ಜನಜಾಗೃತಿ ಸಮಿತಿಯ ಸದಸ್ಯೆ ಪವಿತ್ರ ಕುಡ್ವ ಅವರು ಮಾತನಾಡಿ ಕಳೆದ ಅನೇಕ ವರ್ಷಗಳಿಂದ ದೇಶದ ಚಿತ್ರಣ ನೋಡಿದಾಗ ಮತಾಂದರಿಂದ ಲವ್ ಜಿಹಾದ್ ಬಹಳಷ್ಟು ನಡೆಯುತ್ತಿದೆ. ಅನೇಕ ಮಹಿಳೆಯರು ಈ ಕೃತ್ಯಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಶ್ರದ್ದಾ ವಾಕರ್ ಅವರನ್ನು ಹತ್ಯೆ ಮಾಡಿದ ಆರೋಪಿ ಅಪ್ತಾಬ್ ಅವರನ್ನು ಗಲ್ಲಿಗೇರಿಸಬೇಕು ಎಂದರು. ಮುಂದಿನ ದಿನ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರವನ್ನು ಸರಕಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಹಿಂದು ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಮನ್ವಯಕ ಚಂದ್ರಮುಗೇರ, ಸಮಿತಿ ಸದಸ್ಯ ದಯಾನಂದ, ಬಜರಂಗದಳದ ಹರೀಶ್ ದೋಳ್ಪಾಡಿ, ನೆಲ್ಲಿಕಟ್ಟೆ ಹರಿಪ್ರಸಾದ್ ಶೆಟ್ಟಿ, ವಿಶ್ವಹಿಂದು ಪರಿಷತ್ ಜಿಲ್ಲಾ ಕಾರ್ಯದರ್ಶಿ ಸತೀಶ್ ಬಿ.ಎಸ್, ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು, ನಗರಸಭಾ ಬಿಜೆಪಿ ಸದಸ್ಯರು, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ, ಜನಾರ್ದನ ಬೆಟ್ಟ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here