ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ; ಸಭಾ ಕಾರ್ಯಕ್ರಮದ ಸ್ಥಳ ಬದಲಾವಣೆ

0

ಪುತ್ತೂರು:1837ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯು ಮಂಗಳೂರು ಭಾವುಟಗುಡ್ಡೆಯಲ್ಲಿ ನ.19ರಂದು ನಡೆಯಲಿದೆ.ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಮಂಗಳೂರು ಕರಾವಳಿ ಉತ್ಸವ ಮೈದಾನದಲ್ಲಿ ನೆರವೇರಿಸಲಾಗುವುದು ಎಂದು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಪ್ರಕಟಣೆ ತಿಳಿಸಿದೆ.

ಬಾವುಟಗುಡ್ಡೆಯಲ್ಲಿ ಪ್ರತಿಮೆ ಲೋಕಾರ್ಪಣೆ ಬಳಿಕ ನೆಹರು ಮೈದಾನದಲ್ಲಿ ಸಭಾ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು.ಆದರೆ ಇದೀಗ ನೆಹರು ಮೈದಾನದ ಬದಲು ಕರಾವಳಿ ಉತ್ಸವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಸಲಾಗುವುದು ಎಂದು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ ಜಿಲ್ಲಾ ಸದಸ್ಯ ಚಿದಾನಂದ ಬೈಲಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here