ಕುಂಡಾಜೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

0

ರಾಮಕುಂಜ: ರಾಮಕುಂಜ ಗ್ರಾಮದ ಕುಂಡಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.


ಬಾಲವಿಕಾಸ ಸಮಿತಿ ಅಧ್ಯಕ್ಷೆ ಪದ್ಮಾವತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕುಂಡಾಜೆ ಶಾಲಾ ಮುಖ್ಯಗುರು ಪಿ.ಎಸ್.ನಾರಾಯಣರವರು ಮಕ್ಕಳ ದಿನಾಚರಣೆ ಕುರಿತು ಮಾತನಾಡಿದರು. ಹಿರಿಯ ಆರೋಗ್ಯ ಸಹಾಯಕಿ ಜಲಜರವರು ಆರೋಗ್ಯ ಮಾಹಿತಿ ನೀಡಿದರು. ನಿವೃತ್ತ ಶಿಕ್ಷಕಿ ರಾಜೀವಿ, ಸ್ತ್ರಿಶಕ್ತಿ ಬ್ಲಾಕ್ ಸೊಸೈಟಿ ಮಾಜಿ ಅಧ್ಯಕ್ಷೆ ಜಯರತ್ನ, ಆಶಾ ಕಾರ್ಯಕರ್ತೆ ಪದ್ಮಾವತಿ, ಸಂಜೀವಿನಿ ಒಕ್ಕೂಟದ ಕಾರ್ಯಕರ್ತೆ ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಮಮತಾಶಿವರಾಂ, ಪದ್ಮಾವತಿ, ಆನಂದ, ರಾಜೀವಿ ಶಿವರಾಂ, ಪೂರ್ಣಿಮಾಸೋಮಸುಂದರ ಹಾಗೂ ಸ್ತ್ರೀಶಕ್ತಿ ಸಂಘದವರು ಪ್ರಾಯೋಜಕರಾಗಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಪೋಷಕರು, ಸ್ತ್ರೀಶಕ್ತಿ ಗುಂಪಿನ ಸದಸ್ಯರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಹಾಯಕಿ ಜ್ಯೋತಿ ಸಹಕರಿದಿರು.

LEAVE A REPLY

Please enter your comment!
Please enter your name here