ಆರ್ಯಾಪು ಗ್ರಾ.ಪಂ ಸದಸ್ಯ ಸ್ಥಾನಕ್ಕೆ ವಸಂತ ಶ್ರೀದುರ್ಗಾ ರಾಜೀನಾಮೆ

0

ಪುತ್ತೂರು: ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿಯವರ ವರ್ಗಾವಣೆ ಆದೇಶವನ್ನು ಹಿಂಪಡೆಯುವಂತೆ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯ ಕ್ಕೆ ಸರಕಾರ ಬೆಲೆ ಕೊಡದೇ ಇರುವುದರಿಂದ ಮನನೊಂದು ಆರ್ಯಾಪು ಗ್ರಾ.ಪಂ ಸದಸ್ಯ ವಸಂತ ಶ್ರೀ ದುರ್ಗಾ ಸದಸ್ಯ ಸ್ಥಾನಕ್ಕೆ ನ.18ರಂದು ಪಂಚಾಯತ್ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.


ಗ್ರಾ.ಪಂ ಪಿಡಿಓ ನಾಗೇಶ್ ಎಂ.ರವರ ವರ್ಗಾವಣೆಯ ಆದೇಶವನ್ನು ಹಿಂಪಡೆಯುವಂತೆ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡು ಮುಖ್ಯ ಮಂತ್ರಿ, ಗ್ರಾಮೀಣಾಭಿವೃದ್ಧಿ ಸಚಿವರು, ಶಾಸಕರಿಗೆ ಮನವಿ ಸಲ್ಲಿಸಿದ್ದರೂ ಪಂಚಾಯತ್ ನ ಸಾಮಾನ್ಯ ಸಭೆಯ ನಿರ್ಣಯಕ್ಕೆ ಬೆಲೆ ದೊರೆಯಲಿಲ್ಲ. ಹೀಗಾಗಿ ರಾಜಿನಾಮೆ ಸಲ್ಲಿಸಿರುವುದಾಗಿ ವಸಂತರವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here