ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪುತ್ತೂರಿನಿಂದ ಬಸ್, ಖಾಸಗಿ ವಾಹನಗಳಲ್ಲಿ ತೆರಳಿದ ಸಾವಿರಾರು ಮಂದಿ

0

ಪುತ್ತೂರು: ದೇಶದ ಮೊದಲ ಸ್ವಾತಂತ್ರ್ಯ ಹೋರಾಟಕ್ಕೆ ಬುನಾದಿ ಎಂಬಂತೆ ಎರಡು ದಶಕ ಮೊದಲು ನಡೆದ ರೈತ ಹೋರಾಟದ ಸಂಘಟನಾ ಶಕ್ತಿ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಪ್ರತಿಮೆ ಅನಾವರಣದ ಮಂಗಳೂರು ಬಾವುಟಗುಡ್ಡೆಯಲ್ಲಿ ಮತ್ತು ಕರಾವಳಿ ಮೈದಾನದ ಬಳಿಯ ನಡೆಯುವ ಕಾರ್ಯಕ್ರಮಕ್ಕೆ ಪುತ್ತೂರು ತಾಲೂಕಿನಿಂದ ಸಾವಿರಾರು ಮಂದಿ ಬಸ್‌ಗಳೂ ಮತ್ತು ಖಾಸಗಿ ವಾಹನಗಳಲ್ಲಿ ತೆರಳಿದ್ದಾರೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ಐಟಿಐ ಸಂಸ್ಥೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರುಗದ್ದೆಯಿಂದ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದಿಂದ ಸಂಘದ ಕಚೇರಿ ಬಳಿಯಿಂದ ಮತ್ತು ಪ್ರತಿ ಗ್ರಾಮದಿಂದ ಹಾಗು ನಗರಸಭೆ ವ್ಯಾಪ್ತಿಯಲ್ಲಿ ಸುಮಾರು 75 ಬಸ್‌ಗಳಲ್ಲಿ ಮತ್ತು ಇತರ ಖಾಸಗಿ ವಾಹನಗಳಲ್ಲಿ ಮಂಗಳೂರಿಗೆ ತೆರಳಿದ್ದಾರೆ.

LEAVE A REPLY

Please enter your comment!
Please enter your name here