ಮತದಾರ ಪಟ್ಟಿ ಪರಿಷ್ಕರಣೆ ವಿವಾದ: ಪುತ್ತೂರಿನ ಚುನಾವಣಾ ಕಛೇರಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

0

ಪುತ್ತೂರು: ಬೆಂಗಳೂರಿನಲ್ಲಿ ಮತದಾರ ಪಟ್ಟಿಯಿಂದ ಸಾವಿರಾರು ಮತದಾರರನ್ನು ತೆಗೆದು ಹಾಕಿದ ವಿವಾದದ ಹಿನ್ನೆಲೆಯಲ್ಲಿ ಮತದಾರರ ಬಗ್ಗೆ ಮಾಹಿತಿ ಪಡೆಯಲು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಯವರು ಪುತ್ತೂರು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಛೇರಿಯ ಚುನಾವಣಾ ಶಾಖೆಗೆ ನ.19ರಂದು ಭೇಟಿ ನೀಡಿದರು.

ಚುನಾವಣಾ ಶಾಖೆಯ ಉಪತಹಶೀಲ್ದಾರ್ ಸುಲೋಚನಾ ಪಿ.ಕೆ.ಅವರಿಂದ ಶಕುಂತಳಾ ಶೆಟ್ಟಿ ಮಾಹಿತಿ ಪಡೆದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಇರುವ ಮತದಾರರು, ಹೊಸ ಸೇರ್ಪಡೆ, ಪಟ್ಟಿಯಿಂದ ತೆಗೆದು ಹಾಕಲ್ಪಟ್ಟ ಮತದಾರರ ಹೆಸರಿನ ವಿವರ ನೀಡುವಂತೆ ಶಕುಂತಳಾ ಶೆಟ್ಟಿ ತಿಳಿಸಿದರು. ವಿವರವಾದ ಮಾಹಿತಿ ನೀಡುವುದಾಗಿ ಸುಲೋಚನಾ ತಿಳಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮನಮೋಹನ್ ರೈ, ಕಾರ್ಮಿಕ ಘಟಕದ ಬ್ಲಾಕ್ ಅಧ್ಯಕ್ಷ ಶರೋನ್ ಸಿಕ್ವೇರಾ, ಸೇವಾದಳದ ಬ್ಲಾಕ್ ಅಧ್ಯಕ್ಷ ವಿಶ್ವಜಿತ್ ಅಮ್ಮಂಜೆ, ಪರಿಶಿಷ್ಟ ಜಾತಿ ಘಟಕದ ಬ್ಲಾಕ್ ಅಧ್ಯಕ್ಷ ಕೇಶವ ಪಡೀಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here